
| Rs. 35 | 10% |
Rs. 32/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ವಸಂತ ಪ್ರಕಾಶನ ಪ್ರಕಟಿಸುತ್ತಿರುವ ಈ ವಿಖ್ಯಾತರ ವ್ಯಕ್ತಿಚಿತ್ರ ಮಾಲೆಯಲ್ಲಿ ಧರ್ಮ, ತತ್ವಶಾಸ್ತ್ರ, ಚರಿತ್ರೆ, ವಿಜ್ಞಾನ, ಅರ್ಥಶಾಸ್ತ್ರ, ಪರಿಸರ, ಉದ್ಯಮ, ರಾಜಕೀಯ, ಸಮಾಜ ಸುಧಾರಣೆ, ಸಾಹಿತ್ಯ, ಸಂಗೀತ, ಲಲಿತ ಕಲೆ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನೂ ಅದ್ವಿತೀಯ ಸಾಧನೆಗಳನ್ನೂ ಮಾಡಿದ ಮೇಧಾವಿಗಳ ಜೀವನಚಿತ್ರಗಳಿವೆ. ಇವುಗಳಲ್ಲಿ ಪ್ರತಿಯೊಬ್ಬ ಮೇಧಾವಿಯ ವಿಚಾರಗಳನ್ನು ಅವರ ಕಾಲದ ಸಾಮಾಜಿಕ ಹಾಗೂ ಬೌದ್ಧಿಕ ಪರಿಸರದಲ್ಲಿಟ್ಟು ವಿಶ್ಲೇಷಿಸಲಾಗಿದೆ. ಸಮಾಜದ ಮೇಲೆ ಆ ಮೇಧಾವಿ ಬೀರಿದ ಪ್ರಭಾವ, ಮನುಷ್ಯನನ್ನೂ ಪರಿಸರವನ್ನೂ ಅರ್ಥಮಾಡಿಕೊಳ್ಳುವ ದಿಸೆಯಲ್ಲಿ ಅವರು ನೀಡಿರುವ ನಿರ್ದಿಷ್ಟ ಕೊಡುಗೆ, ಅವರ ವಿಚಾರಗಳ ಸ್ಫೂರ್ತಿಯಿಂದ ರೂಪುಗೊಂಡಿರುವ ಜೀವನಕ್ರಮ, ಇವುಗಳನ್ನೂ ವಿವರಿಸಲಾಗಿದೆ. ಸಾಧ್ಯವಾದ ಕಡೆಗಳಲ್ಲೆಲ್ಲ ಮೇಧಾವಿಗಳ ಮಾತುಗಳಿಂದ, ಬರವಣಿಗೆಗಳಿಂದ ಸೂಕ್ತವೆಂದು ಕಂಡುಬಂದ ಭಾಗಗಳನ್ನು ಉದ್ಧರಿಸಲಾಗಿದೆ. ಹೊಸ ಸಿದ್ಧಾಂತಗಳನ್ನು ಸೃಷ್ಟಿಸಿದವರ, ಹೊಸ ಚಳವಳಿಗಳನ್ನು ಸ್ಥಾಪಿಸಿದವರ, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮಹತ್ವದ ಪ್ರಭಾವವೂ ಘನತೆಯೂ ಇದ್ದು, ಹೊಸ ಆವಿಷ್ಕಾರಗಳನ್ನೋ ಅದ್ವಿತೀಯ ಸಂಯೋಜನೆಯನ್ನೋ ಮಾಡಿದವರ ಬಗೆಗೆ ವಿಶೇಷ ಗಮನ ನೀಡಲಾಗಿದೆ. ಒಟ್ಟಿನಲ್ಲಿ ಈ ಪುಸ್ತಕಗಳು ಸಂತೋಷದಿಂದ ಓದಬಲ್ಲ ಕೃತಿಗಳಾಗಿರುವಂತೆಯೇ ನಮ್ಮ ನಾಗರಿಕತೆಯನ್ನು, ಅದರ ವಿಕಾಸದ ವೈಚಾರಿಕ ಹಾಗೂ ಆಧ್ಯಾತ್ಮಿಕ ಸ್ರೋತಗಳನ್ನು, ಭವಿಷ್ಯದ ಒಲವುನಿಲುವುಗಳನ್ನು ಆಳವಾಗಿ ಅರಿಯಲು ಸಹಾಯಕವಾಗಿವೆ. ಇವುಗಳನ್ನು ಓದುವ ಮೂಲಕ ತಮ್ಮ ಜೀವನದರ್ಶನ ಏನೆಂದು ಸ್ಪಷ್ಟಪಡಿಸಿಕೊಳ್ಳಬಲ್ಲ ಸ್ವತಃ ಮೇಧಾವಿಗಳಾದರೆ ಆಶ್ಚರ್ಯವಿಲ್ಲ.
|
ಎಚ್. ಎಸ್. ಮಂಜುನಾಥ ಹವ್ಯಾಸಿ ಲೇಖಕರು ಹಾಗೂ ಫ್ರೀಲ್ಯಾನ್ಸ್ ಪತ್ರಕರ್ತರು. ಇವರ :ಮಧ್ಯಪ್ರದೇಶ : ಐದು ವರ್ಷ", "ಹತ್ತು ಸುತ್ತು", "ಸಂತಾಲರ ಜಾನಪದ ಕಥೆಗಳು", "ಮಾಯಾ ಮಂಜೂಷ", "ಚಾರ್ಲಿ ಚಾಪ್ಲಿನ್", "ಚಿತ್ರೋತ್ಸವಗಳು : ಹಿನ್ನೆಲೆ ಮುನ್ನೆಲೆ", "ಭವಿಷ್ಯದ ಕಥೆಗಳು" (ಅನುವಾದ), "ಅಪ್ಪ-ಅಮ್ಮ : ಪತ್ರ-ಚಿತ್ರ" (ಸಂಪಾದಿತ) ಮುಂತಾದ ಕೃತಿಗಳು ಪ್ರಕಟಗೊಂಡಿವೆ.
|
|
| |
|
|
|
|