|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಅಭಿನವ, Abhinava |
ಈಗಿನ ಮುದ್ರಣದ ಸಂಖ್ಯೆ |
: |
1 |
ಮುದ್ರಣದ ವರ್ಷ |
: |
2014 |
ರಕ್ಷಾ ಪುಟ |
: |
ಉತ್ತಮ |
ಪುಟಗಳು |
: |
528 |
ಪುಸ್ತಕದ ಗಾತ್ರ |
: |
1/4 Crown Size |
ISBN |
: |
9789381055342 |
ಕೋಡ್ |
: |
182955 |
ಹೆಸರಿಗೆ ತಕ್ಕಂತೆ ನಮ್ಮ ತಲೆಮಾರಿನ ಪ್ರಾಧ್ಯಾಪಕ ಪರಿವಾರದಲ್ಲಿ `ಶ್ರೇಷ್ಠರು` ಎನಿಸಿರುವ ಪ್ರೊಫೆಸರ್ ಷ. ಶೆಟ್ಟರ್ ಬೋಧನೆಯಂತೆ ಬರಹದ ಮೂಲಕವೂ ಪ್ರಸಿದ್ಧರು. ಇವರ ಇತ್ತೀಚಿನ ಬರವಣಿಗೆಯಾಗಿರುವ ‘ಹಳಗನ್ನಡ ಲಿಪಿ, ಲಿಪಿಕಾರ, ಲಿಪಿವ್ಯವಸಾಯ’ವು ಮಹತ್ವಾಕಾಂಕ್ಷೆಯ ಕೃತಿಯಾಗಿದೆ; ಶೀರ್ಷಿಕೆಯನ್ನು ಮೀರಿ ಬೆಳೆದ ಅಭ್ಯಾಸವಾಗಿದೆ. ಕಳೆದ ನೂರು ವರ್ಷಗಳಿಂದ ಕನ್ನಡ ನಾಡಿನ ಶಾಸನಗಳನ್ನು ಬಳಸಿಕೊಂಡು ಅನೇಕ ವಿದ್ವಾಂಸರು ಕೃತಿ ರಚಿಸಿದ್ದುಂಟು. ಇವೇ ಶಾಸನಗಳನ್ನು ಬಳಸಿಕೊಂಡು ಪ್ರೊ. ಶೆಟ್ಟರ್ ಇಲ್ಲಿ ಭಿನ್ನ ಫಲಿತಾಂಶ ಪ್ರಕಟಿಸಿದ್ದಾರೆ. ನಿಜವಾದ ಸಂಶೋಧಕನಿಗೆ ಹೊಸ ಆಕರ ಬೇಕೆಂದೇನೂ ಇಲ್ಲ. ತನ್ನ ವ್ಯಾಖ್ಯಾನ ಸಾಮರ್ಥ್ಯದಿಂದ ಅವನು ಹಳೆಯ ಆಕರಗಳಿಂದಲೇ ಹೊಸ ಮಾತುಗಳನ್ನು ಹೊರಡಿಸಬಲ್ಲನೆಂಬುದಕ್ಕೆ ಈ `ಮರುವ್ಯಾಖ್ಯಾನಶೋಧ` ನಿದರ್ಶನವಾಗಿದೆ. `ನಾವು ಶಿಲ್ಪವನ್ನು ಅಭ್ಯಸಿಸಿದ್ದೇವೆ, ಶಿಲ್ಪಿಗಳನ್ನು ಮರೆತಿದ್ದೇವೆ; ಲಿಪಿಯನ್ನು ಅಭ್ಯಸಿಸಿದ್ದೇವೆ, ಲಿಪಿಕಾರರನ್ನು ಮರೆತಿದ್ದೇವೆ` ಎಂದು ಮೇಲಿಂದ ಮೇಲೆ ಎಚ್ಚರಿಸುತ್ತ ಬಂದಿರುವ ಪ್ರೊ. ಶೆಟ್ಟರ್, ಈಗ ಮೊದಲ ಸಹಸ್ರಮಾನದ ನಮ್ಮ ಶಾಸನ ಲಿಪಿಕಾರರನ್ನು ಕುರಿತು ಇನ್ನೊಬ್ಬರು ಕೈಯಿಡದಂತೆ ಪೂರ್ಣ ಅಭ್ಯಾಸವನ್ನು ಪೂರೈಸಿದ್ದಾರೆ.
|
ಪ್ರೊ. ಷ. ಶೆಟ್ಟರ್ ಅವರು ಜನಿಸಿದ್ದು ೧೯೩೫ ನೇ ಇಸವಿಯಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ನಲ್ಲಿ ಉನ್ನತ ವ್ಯಾಸಂಗ ಪಡೆದ ಇವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕಾವ್ಯ ಕುರಿತು ಸುಮಾರು ೨೭ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇದೆ.
ಶ್ರೀಯುತರು ದೇಶ-ವಿದೇಶಗಳಲ್ಲಿ ಮನ್ನಣೆ ಪಡೆದಿರುತ್ತಾರೆ. ಕೇಂಬ್ರಿಜ್, ಹಾರ್ವರ್ಡ್, ಹೈಡಲ್ ಬರ್ಗ್, ಅಥೆನ್ಸ್, ಲೈಡನ್, ಮಾಸ್ಕೋ ವಿಶ್ವವಿದ್ಯಾನಿಲಯಗಳಲ್ಲಿ ಕೆಲಕಾಲ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಲವಾರು ರಾಜ್ಯ ಹಾಗು ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಸಂದಿವೆ. ಇವರು ಭಾರತೀಯ ಇತಿಹಾಸ ಅನುಸಂಧಾನ ಪರಿಷತ್, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ ಹಾಗು ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್ ಗಳ ಸರ್ವಾಧ್ಯಕ್ಷ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅಲ್ಲದೇ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ವಿಶ್ವಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನದ ಗೌರವವನ್ನೂ ಇವರು ಪಡೆದಿದ್ದಾರೆ.
೧೯೬೦-೯೬: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೋಧನೆ
೧೯೭೮-೯೫: ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ
೧೯೯೬-೯೯: ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ
೨೦೦೨-೧೦: ಬೆಂಗಳೂರಿನ ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ. ಎಸ್. ರಾಧಾಕೃಷ್ಣನ್ ಪ್ರಾಧ್ಯಾಪಕತ್ವ ಹಾಗು ೨೦೧೦ ರಿಂದ ಇದೇ ಸಂಸ್ಥೆಯಲ್ಲಿ ಎಮೆರಿಟಸ್ ಪ್ರಾಧ್ಯಾಪಕ ಸ್ಥಾನ[೧]
೨೦೦೫ ರಿಂದ ಇಂದಿರಾ ಗಾಂಧಿ ರಾಷ್ಟ್ರೀಯ ಕಲಾಕೇಂದ್ರ ದಕ್ಷಿಣ ಭಾರತ ಶಾಖೆಯ ಗೌರವ ನಿರ್ದೇಶಕತ್ವ[೨].
|
|
| |
|
|
|
|
|
|
|
|
|