|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಅಲೆಮಾರಿಯ ಅಂಡಮಾನ್ : ಕನ್ನಡ ಸಾಹಿತ್ಯದಲ್ಲಿ ಈವರೆಗೂ ಬಂದಿಲ್ಲದ ಹೊಸರೀತಿಯ ಅಸಾಧಾರಣ ಪ್ರವಾಸ ಕಥನ. ಕಾಲ ಮತ್ತು ದೇಶಗಳಲ್ಲಿ, ಅಥವಾ ಚರಿತ್ರೆ ಮತ್ತು ವರ್ತಮಾನಗಳಲ್ಲಿ ಒಮ್ಮೆಲೇ ಚಲಿಸುವ ಬರಹಗಾರರ ಪ್ರಜ್ಞೆ ಅನುಭವಗಳ ಅನೇಕ ಆಯಾಮಗಳನ್ನು ಸಂಕೀರ್ಣವಾಗಿ ಒಟ್ಟೊಟ್ಟಿಗೇ ಸೃಷ್ಟಿಸಿರುವುದನ್ನು ಈ ಕೃತಿಯಲ್ಲಿ ಎಲ್ಲೆಂದರಲ್ಲಿ ಕಾಣಬಹುದು. ಈ ಪ್ರಯತ್ನದಲ್ಲಿ ಲೇಖಕರು ಹೊಚ್ಚ ಹೊಸ ಕಥನ ತಂತ್ರವನ್ನೇ ಕನ್ನಡ ಸಾಹಿತ್ಯದಲ್ಲಿ ರೂಪಿಸಿದ್ದಾರೆ. ಪ್ರವಾಸ ಸಾಹಿತ್ಯದ ಏಕಮುಖ ಏಕತಾನವಿಲ್ಲದ ಈ ಕೃತಿಯಲ್ಲಿ ಅನುಭವಗಳು ಒಂದು ದಿಕ್ಕಿಗೆ ಹರಿಯದೆ ಎಲ್ಲ ದಿಕ್ಕುಗಳಿಗೂ ವಿಸ್ತರಿಸುತ್ತದೆ. ಮಹಾನದಿ ನೈಲ್ : ನೈಲ್ ನದಿ ಉಗಮದ ಸಾಹಸ ಯಾತ್ರೆಯ ನೆವದಲ್ಲಿ ಅದು ಇಡೀ ಆಫ್ರಿಕಾ ಖಂಡದ ಅಂತರಂಗವನ್ನು ಬೆಚ್ಚಿಬೀಳಿಸುವಂತೆ ಬಿಚ್ಚಿಡುತ್ತದೆ. ಆಫ್ರಿಕಾದ ವಿಸ್ಮಯಕರ ವ್ಯಕ್ತಿತ್ವ, ಅದರ ಮಾಂತ್ರಿಕ ಆಕರ್ಷಣೆ, ಅದರ ಭಯಜನಕ ಕಗ್ಗತ್ತಲು, ನೈಲ್ ನದಿಯಲ್ಲಿ ಲೀನವಾಗಿ ಹರಿಯುತ್ತಿರುವುದು ಅದಕ್ಕಾಗಿ ಪ್ರಾಣಾರ್ಪಣೆ ಮಾಡಿದ ಧೀರರೊಂದಿಗೇ ಓದುಗರಿಗೂ ಅನುಭವಗಮ್ಯವಾಗುತ್ತದೆ.
|
ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ ಪದವಿ ಗಳಿಸಿದ್ದಾರೆ.
|
|
| |
|
|
|
|
|
|
|
|
|