|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಜ್ಞಾನಪೀಠ ಪುರಸ್ಕೃತರಾದ ಡಾ|| ಯು. ಆರ್. ಅನಂತಮೂರ್ತಿಯವರು ಕಂಬಾರರ ಕಾವ್ಯದ ವೈಶಿಷ್ಟ್ಯವನ್ನು ಕುರಿತು
"ಕ್ಷಿತಿಜದ ಕಣ್ಣಲ್ಲಿ ಬೆಳಕು ಹೊಳೆಯೊ ಹಾಂಗ
ಹಾಡಬೇಕೋ ತಮ್ಮಾ ಹಾಡಬೇಕು
ಕಲ್ಲಿನ ಎದೆಯಲ್ಲಿ ಜೀವಜಲ ಚಿಲ್ಲೆಂದು
ಚಿಮ್ಮುವಂಥಾ ಹಾಡ ಹಾಡಬೇಕು
ಆಕಾಶದಂಗಳ ಬೆಳದಿಂಗಳೂ ಕೂಡಾ
ಕಂಗಾಲಾಗುವ ಹಾಡ ಹಾಡಬೇಕು"
ಎಂದು ಹೇಳುವ ಮಾತು ಕಂಬಾರರ ಪ್ರತಿಭೆಗೆ ಹಿಡಿದ ಕನ್ನಡಿಯಾಗಿದೆ.
"ನವ್ಯ ಚಳವಳಿಯಲ್ಲಿ ಬಂದವರಲ್ಲಿ ಬಹಳಷ್ಟು ಮಂದಿ ಎಲಿಯಟ್ನನ್ನು ಅನುಕರಣೆ ಮಾಡ್ತಿದ್ದಾಗ ನಾನು "ಹೇಳತೇನ ಕೇಳ" ಬರೆದೆ. ವಸಾಹತುಶಾಹಿಯ ಆಕ್ರಮಣದಿಂದ ನಮ್ಮ ಸಂಸ್ಕೃತಿ ಹೇಗೆ ನಾಶ ಆಗುತ್ತಿದೆ ಅಂತ ಹೇಳಿದೆ. ಹಾಗೆ ನೋಡಿದರೆ ನನ್ನ ಕಾವ್ಯವೇ ನವ್ಯರಿಗಿಂತ ಹೆಚ್ಚು ಮಾಡರ್ನ್. ನನ್ನ ಸಂಸ್ಕೃತಿಯನ್ನು ನಾನು ಹೇಗೆ ಉಳಿಸಿಕೊಳ್ಳಬೇಕು ಅನ್ನೋದು ನನಗೆ ಮುಖ್ಯವೇ ಹೊರತು ಎಲಿಯಟ್ನನ್ನು ಕಾಪಿ ಮಾಡೋದಲ್ಲ. ನನ್ನ ಹಳ್ಳಿಯನ್ನು ನಾನು ಪ್ರೀತಿಸ ಬೇಕು ಅಲ್ಲವೆ" ..ಎನ್ನುವ ಕಂಬಾರರು ನುಡಿದಂತೆ ಬರೆದವರು. ಬರೆದಂತೆ ಬದುಕಿದವರು.
|
ಶ್ರೀ ಟಿ ಎಸ್ ಗೋಪಾಲ್ ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎ. ಹಾಗೂ ಎಂ.ಎ. ಪದವಿಗಳನ್ನು ಚಿನ್ನದ ಪದಕಗಳೊಂದಿಗೆ ಪಡೆದವರು. ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರು. ನಾಗರಹೊಳೆ ವನ್ಯಜೀವಿಸಂರಕ್ಷಣಾ ಶಿಕ್ಷಣ ಯೋಜನೆಯಲ್ಲಿ ಸಕ್ರಿಯ ಪಾತ್ರವಹಿಸಿದ್ದರು. ಇವರು ಬರೆದ ‘ನವಕರ್ನಾಟಕ ಕನ್ನಡ ಕಲಿಕೆ’ ಮಾಲೆಯ ಹತ್ತು ಪುಸ್ತಕಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
|
| |
|
|
|
|
|
|
|
|
|