|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಒಂದಕ್ಕಿಂತ ಹೆಚ್ಚು ನೊಬೆಲ್ ಪಾರಿತೋಷಕಗಳಿಗೆ ಅರ್ಹವಾಗುವಂತಹ ಸಂಶೋಧನೆಗಳನ್ನು ನಡೆಸಿದರೂ ಆ ಬಗ್ಗೆ ಹೆಗ್ಗಳಿಕೆಯನ್ನು ತೋರದೆ, ಅವರ ಧೀಃಶಕ್ತಿಗೆ ಸ್ವದೇಶ-ವಿದೇಶಗಳು ಸೂಕ್ತ ಮನ್ನಣೆಯನ್ನು ನೀಡದಿದ್ದರೂ, ಸಮಚಿತ್ತವನ್ನು ಕಾಪಾಡಿಕೊಂಡು ತಮ್ಮ ಪಾಡಿಗೆ ತಾವು ಸಂಶೋಧನೆಯಲ್ಲಿ ತೊಡಗಿಸಿಕೊಂಡು ಹೋದವರು ಸುಬ್ಬರಾವ್! ನ್ಯಾಯಯುತವಾಗಿ ತಮಗೆ ಸಲ್ಲಬೇಕಾಡ ಗೌರವ ಮತ್ತೊಬ್ಬರ ಪಾಲಾದಾಗಲು, ಆ ಬಗ್ಗೆ ತಲೆಕೆಡಿಸಿಕೊಳ್ಳದೆ ಒಂದರ ಮೇಲೊಂದರಂತೆ ಸಂಶೋಧನೆಗಳನ್ನು ನಡೆಸುತ್ತಾ ಹೋದರು. ಅವರು ಅಂದು ಕಂಡುಹಿಡಿದ ಔಷಧಗಳು ಇಂದಿಗೂ ಮನುಕುಲ ಸೇವೆಯಲ್ಲಿ ಮಗ್ನವಾಗಿವೆ.
|
ಡಾ|| ವಸುಂಧರಾ ಭೂಪತಿ ಪ್ರಖ್ಯಾತ ಆಯುರ್ವೇದ ವೈದ್ಯೆ. ಪ್ರವೃತ್ತಿಯಲ್ಲಿ ಸಾಹಿತಿಯಾದ ಇವರ ೩೬ ಪುಸ್ತಕಗಳು ಪ್ರಕಟಗೊಂಡಿವೆ. ಇಂಗ್ಲಿಷ್, ಹಿಂದಿ ಭಾಷೆಗೆ ಇವರ ಕೆಲವು ಪುಸ್ತಕಗಳು ಅನುವಾದಗೊಂಡಿವೆ. ವೈದ್ಯಲೋಕ ಮಾಸಪತ್ರಿಕೆಯ ಸಂಪಾದಕರಾಗಿದ್ದಾರೆ. ಇವರು ಸಹಲೇಖಕಿಯಾಗಿ ರಚಿಸಿದ ಮನೆಯಂಗಳದಲ್ಲಿ ಔಷಧಿವನ ಪುಸ್ತಕ ಹಲವು ಮುದ್ರಣಗಳನ್ನು ಕಂಡಿದ್ದು, ‘ಶ್ರೇಷ್ಠ ಲೇಖಕಿ ಪುರಸ್ಕಾರ‘ ದೊರೆತಿದೆ. ೨೦೦೭ರಲ್ಲಿ ಎಚ್.ಐ.ವಿ.ಏಡ್ಸ್ ಲೇಖನಕ್ಕೆ ‘ಯೂನಿಸೆಫ್ ಪತ್ರಿಕೋದ್ಯಮ ಪ್ರಶಸ್ತಿ‘, ಹೂವು ಮತ್ತು ಆರೋಗ್ಯ ಪುಸ್ತಕಕ್ಕೆ ‘ಅಕಲಂಕ ಪ್ರಶಸ್ತಿ‘, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ೨೦೧೨ರಲ್ಲಿ ‘ಶ್ರೇಷ್ಠ ವಿಜ್ಞಾನ ಸಂವಹನಕಾರ ರಾಜ್ಯ ಪ್ರಶಸ್ತಿ‘, ಮುಂತಾದ ಪ್ರಶಸ್ತಿಗಳು ದೊರೆತಿವೆ. ಪ್ರಸ್ತುತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿದ್ದಾರೆ.
|
|
| |
|
|
|
|
|
|
|
|
|