|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರತಿಯೊಬ್ಬರೂ ಶಾಲೆಯಲ್ಲಿ ಗಣಿತ ಕಲಿತೇ ಇರುತ್ತಾರೆ. ಪಾಸು ಎನ್ನುವುದು ಅನಿವಾರ್ಯ; ಆದ್ದರಿಂದ ಪಾಸೂ ಮಾಡಿರುತ್ತಾರೆ. ಆದರೆ ಶಾಲೆಯಲ್ಲಿ ಕಲಿತ ಗಣಿತದ ಎಷ್ಟು ಭಾಗ ಹಲವಾರು ವರ್ಷಗಳ ನಂತರವೂ ನೆನಪಿನಲ್ಲಿ ಉಳಿದಿದೆ ಎಂದು ಪ್ರಶ್ನೆ ಕೇಳಿದಾಗ ಅವರ ವೃತ್ತಿಗೆ ಅನುಗುಣವಾಗಿ ವೈವಿಧ್ಯಮಯ ಉತ್ತರಗಳು ದೊರಕುತ್ತವೆ. ಗಣಿತದಂತಹ ಕಠಿಣ ವಿಷಯವನ್ನು ರಂಜನೀಯವಾಗಿ ಮಾಡಿ ಚಮತ್ಕಾರಗಳನ್ನು ಒಡಲಲ್ಲಿಟ್ಟುಕೊಂಡೇ ದೈನಂದಿನ ವ್ಯವಹಾರಗಳ ಮೂಲಕ ಗಣಿತವನ್ನು ನಮಗರಿವಿಲ್ಲದಂತೆ ಬೋಧಿಸುವ ಪುಸ್ತಕವಿದು. ಕತೆ ಹೇಳುತ್ತಲೇ ನಾವು ಮಕ್ಕಳಿಗೆ ಒಳ್ಳೆಯ ನಡತೆ ಕಲಿಸುವುದಿಲ್ಲವೇ ಹಾಗೆ ? ಗಣಿತವೆಂದರೆ ನಿದ್ದೆಯಲ್ಲೂ ಬೆಚ್ಚಿಬೀಳುವ ವಿದ್ಯಾರ್ಥಿಗಳಿಗೆ ಹೇಳಿ ಬರೆಸಿದಂತೆ ಬಹಳ ಸ್ವಾರಸ್ಯಕರವಾಗಿ ನಿರೂಪಿಸಿದೆ. ಗಣಿತವನ್ನು ಸಂತೋಷವಾಗಿ ಕಲಿಯುವಂತಾಗಲು, ಸೂಕ್ಷ್ಮಗಳನ್ನು ತಿಳಿದುಕೊಳ್ಳಲು ಈ ಪುಸ್ತಕ ಸಹಾಯಕ.
|
ಶ್ರೀಮತಿ ಬಿ ಎಸ್ ಶೈಲಜಾ ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, ಅತಿ ಹೆಚ್ಚು ಉಷ್ಣತೆಯ ಯಮಳ ನಕ್ಷತ್ರಗಳ ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ. ಪದವಿಯನ್ನು ಗಳಿಸಿದ್ದಾರೆ. ‘ಹೊಸತು’ ಪತ್ರಿಕೆಯ ಪ್ರಾರಂಭದಿಂದಲೂ ‘ನಭಾವಲೋಕನ’ ಅಂಕಣ ಬರೆಯುತ್ತಿದ್ದಾರೆ. ಖಗೋಳ್ ವಿಜ್ಞಾನಕ್ಕೆ ಸಂಬಂಧಿಸಿ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಇವರ ‘ಬಾನಿಗೊಂದು ಕೈಪಿಡಿ’, ‘ಸಫಾರಿ ಎಂಬ ಲಕ್ಷುರಿ’, ‘ಶುಕ್ರಗ್ರಹದ ಸಂಕ್ರಮಣ’, ‘ಆಗಸದ ಅಲೆಮಾರಿಗಳು’, ‘Chintamani Ragoonatha Charry and Contemporary Indian Astronomy’ ‘ಏನು...? ಗಣಿತ ಅಂದ್ರಾ...?’ ಮುಂತಾದ ಕೃತಿಗಳು ನವಕರ್ನಾಟಕದಿಂದ ಪ್ರಕಟಗೊಂಡಿವೆ. ‘ಶುಕ್ರಗ್ರಹದ ಸಂಕ್ರಮಣ’, ‘ಆಗಸದ ಅಲೆಮಾರಿಗಳು’, ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಪ್ರಸ್ತುತ ಇವರು ಬೆಂಗಳೂರಿನ ಜವಾಹರಲಾಲ್ ನೆಹರೂ ತಾರಾಲಯದ ನಿರ್ದೇಶಕಿಯಾಗಿದ್ದಾರೆ.
|
|
| |
|
|
|
|
|
|
|
|
|