|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪುಸ್ತಕದ ಬಗ್ಗೆ ವಿವರಣೆ:
ಕನ್ನಡವನ್ನು ಬರಹಕ್ಕೆ ಇಳಿಸುವಾಗ ಹಲವಾರು ಕಾರಣಗಳಿಂದಾಗಿ ಕನ್ನಡದ ವರ್ಣಮಾಲೆಯಲ್ಲಿ ಹೆಚ್ಚಿನ ಅಕ್ಷರಗಳನ್ನು ಉಳಿಸಿಕೊಳ್ಳಲಾಗಿತ್ತು. ಈ ಕೆಲವು ಹೆಚ್ಚಿನ ಅಕ್ಷರಗಳನ್ನು ಹಾಗೆ ಉಳಿಸಿಕೊಳ್ಳಲು ಏನೇ ಕಾರಣಗಳಿದ್ದರೂ ಅವುಗಳ ಉಲಿಯುವಿಕೆ ಮಾತ್ರ ನಿಜವಾಗಿಯೂ ಕನ್ನಡ ನುಡಿಯಲ್ಲಿ ಅಂದರೆ ಕನ್ನಡ ಮಾತಲ್ಲಿ ಇರಲಿಲ್ಲ ಹಾಗೂ ಈಗಲೂ ಇಲ್ಲ. ಕನ್ನಡಿಗರ ಉಲಿಯುವಿಕೆಗೆ ತಕ್ಕಂತೆ ಬರೆಯುವುದಾದರೆ 31 ಅಕ್ಷರಗಳು ಮಾತ್ರ ಸಾಕಾಗುತ್ತವೆ. ಮಹಾಪ್ರಾಣಗಳು, ವಿಸರ್ಗ, ಋ ಮತ್ತು ಷ ಮೊದಲಾದ ಅಕ್ಷರಗಳು ಕನ್ನಡಕ್ಕೆ ಅನವಶ್ಯಕ.
ಈ ವಿಷಯಗಳ ಕುರಿತಾಗಿ ಡಾ ಡಿ ಎನ್ ಶಂಕರ ಬಟ್ಟರು ಹಲವು ವರುಶಗಳಿಂದ ಹೇಳುತ್ತ ಬಂದಿದ್ದಾರೆ. ಈ ಎಲ್ಲ ವಿಷಯಗಳನ್ನು ಒಟ್ಟು ಸೇರಿಸಿ ಚುಟುಕಾಗಿ ‘ಕನ್ನಡಕ್ಕೆ ಮಹಾಪ್ರಾಣ ಯಾಕೆ ಬೇಡ?‘ ಎಂಬ ಹೊತ್ತಗೆಯನ್ನು ಬರೆದಿದ್ದಾರೆ. ಈ ಹೊತ್ತಗೆಯಲ್ಲಿ ಮಹಾಪ್ರಾಣಗಳೇ ಮೊದಲಾದ ಅಕ್ಷರಗಳು ಯಾಕೆ ಕನ್ನಡಕ್ಕೆ ಅನವಶ್ಯಕ ಎಂದು ತೋರಿಸಿರುವುದಲ್ಲದೆ, ಯಾವುದೇ ಹೊಸ ಮಾರ್ಪಾಟುಗಳಿಲ್ಲದೆ ಕನ್ನಡಕ್ಕೆ ಬೇಕಾಗುವಂತೆ ವರ್ಣಮಾಲೆಯನ್ನು ಹೇಗೆ ಒಗ್ಗಿಸಿಕೊಳ್ಳಬಹುದು ಮತ್ತು ಹಾಗೆ ಮಾಡುವುದರಿಂದ ಕನ್ನಡ ಸಮಾಜಕ್ಕೆ ಆಗುವ ಒಳಿತುಗಳೇನು ಎಂಬುದನ್ನು ತಿಳಿಸಲಾಗಿದೆ. ಅಲ್ಲದೆ ಹೀಗೆ ಲಿಪಿಯನ್ನು ತಮ್ಮ ನುಡಿಯ ಉಚ್ಚಾರಣೆಗೆ ತಕ್ಕಂತೆ ಒಗ್ಗಿಸಿಕೊಂಡ ಪ್ರಪಂಚದ ಹಲವು ನುಡಿಗಳ ಉದಾಹರಣೆಗಳನ್ನು ಈ ಹೊತ್ತಗೆಯಲ್ಲಿ ನೀಡಲಾಗಿದೆ.
|
ಡಾ. ಡಿ. ಎನ್. ಶಂಕರ ಭಟ್ ಅವರು ಜಗತ್ತಿನ ಹೆಸರಾಂತ ಭಾಷಾ ವಿಜ್ಞಾನಿಗಳು. ಮದ್ರಾಸ್ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಎಂ.ಎ. ಮತ್ತು ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ. ಪಡೆದಿರುವ ಭಟ್ಟರು, ಅಮೇರಿಕಾದ ಸ್ಟ್ಯಾನ್ ಫೋರ್ಡ್ ಯೂನಿವರ್ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯೂನಿವರ್ಸಿಟಿ, ಬೆಲ್ಜಿಯಂ ದೇಶದ ಆಂಟ್ವರ್ಪ್ ಯೂನಿವರ್ಸಿಟಿ, ಜರ್ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಸಂಶೋಧಕರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಸಂಶೋಧನೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ಹೆಸರುಗಳಿಸಿವೆ.
ಕನ್ನಡ ನುಡಿಯ ಬಗ್ಗೆ ಶಂಕರ ಭಟ್ಟರು ಹಲವು ವರ್ಷಗಳ ಆಳವಾದ ಸಂಶೋಧನೆ ನಡೆಸಿದ್ದು, ಈ ನಿಟ್ಟಿನಲ್ಲಿ ಪಡೆದುಕೊಂಡ ತಿಳುವಳಿಕೆಗಳನ್ನು ಒಗ್ಗೂಡಿಸಿ ಹಲವು ಹೊತ್ತಗೆಗಳನ್ನು ಬರೆದಿದ್ದಾರೆ. ಕನ್ನಡ ನುಡಿಯು ನಡೆದು ಬಂದ ದಾರಿ, ಕನ್ನಡದಲ್ಲಿರುವ ವ್ಯಾಕರಣದ ನಿಜವಾದ ಕಟ್ಟಲೆಗಳು, ಕನ್ನಡದ ಪದ ಸೊಗಡು ಮುಂತಾದವುಗಳ ಕುರಿತು ಭಟ್ಟರು ಬರೆದಿರುವ ಕನ್ನಡ ನುಡಿಯರಿಮೆಯ ಹೊತ್ತಗೆಗಳು, ಹಿಂದಿನಿಂದ ಕಣ್ಣುಮುಚ್ಚಿ ನಂಬಿಕೊಂಡು ಬಂದಿದ್ದ ಹಲವಾರು ತಪ್ಪು ತಿಳುವಳಿಕೆಗಳನ್ನು ಮತ್ತು ಅವುಗಳನ್ನು ಸರಿಪಡಿಸುವ ಬಗೆಗಳನ್ನು ಕನ್ನಡ ಸಮಾಜಕ್ಕೆ ತೋರಿಸಿಕೊಟ್ಟಿವೆ.
ಭಾಷಾ ವಿಜ್ಞಾನದಲ್ಲಿ ಇವರ ಕೆಲಸವನ್ನು ಗುರುತಿಸಿ ಹಂಪಿ ವಿಶ್ವವಿದ್ಯಾಲಯವು ಇವರಿಗೆ `ನಾಡೋಜ` ಪದವಿಯನ್ನೂ ಹಾಗೂ ಕರ್ನಾಟಕ ಸರಕಾರವು ಪಂಪ ಪ್ರಶಸ್ತಿಯನ್ನೂ ನೀಡಿ ಗೌರವಿಸಿದೆ.
|
|
| |
|
|
|
|
|
|
|
|
|