|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ನಿಮ್ಮ ಮಗು ನಿಮ್ಮ ಕರುಳಿನ ಕುಡಿ. ನಿಮ್ಮ ಮನೆಯ, ನಿಮ್ಮ ಮುಪ್ಪಿನ ಆಧಾರ ಸ್ತಂಭ. ಅದರ ಪಾಲನೆ - ಪೋಷಣೆಯ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಮಗು ಬೆಳೆದು ಪ್ರೌಢನಾಗುವುದು ಒಂದು ಸಂಕೀರ್ಣ ಪ್ರಕ್ರಿಯೆ. ಬೆಳವಣಿಗೆ ಎಂದರೆ ಕೇವಲ ದೇಹ ಬೆಳೆಯುವುದಲ್ಲ; ಮನಸ್ಸು ಬೆಳೆಯಬೇಕು, ಬುದ್ಧಿ ವಿಕಾಸವಾಗಬೇಕು. ಇದಕ್ಕೆ ಪುಷ್ಟಿಕರವಾದ ಆಹಾರ, ಆಟ, ಪಾಠ ಎಷ್ಟು ಮುಖ್ಯವೋ, ನಿಮ್ಮ ಮಮತೆ, ಮಾರ್ಗದರ್ಶನ, ಆಸರೆ ಪ್ರೋತ್ಸಾಹಗಳೂ ಅಷ್ಟೇ ಮುಖ್ಯ. ಬೆಳೆಯುವ ಮಗು ಅನಾರೋಗ್ಯ ಪೀಡಿತವಾಗುವುದು ಸಹಜ. ಅನಾರೋಗ್ಯ ದೇಹಕ್ಕೆ ಬರಬಹುದು,ಮನಸ್ಸಿಗೆ ಬರಬಹುದು. ಯಾವುದೇ ಅನಾರೋಗ್ಯವನ್ನು ಪ್ರಾರಂಭದಲ್ಲೇ ಗುರುತಿಸಬೇಕು. ಸೂಕ್ತ ಚಿಕಿತ್ಸೆ ಮತ್ತು ಪರಿಹಾರವನ್ನು ನಡೆಸಬೇಕು. ಮಾನಸಿಕ ಅನಾರೋಗ್ಯ ಮಕ್ಕಳಲ್ಲಿ ಹಲವು ಬಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ತಂದೆ ತಾಯಿಗಳು, ಮನೆಯ ಇತರರು, ಉಪಾಧ್ಯಾಯರು, ವೈದ್ಯರು ಮತ್ತು ಸಂಬಂಧಪಟ್ಟವರು ಸಹಕರಿಸಿದರೆ, ಮಗುವಿನ ಮಾನಸಿಕ ಅನಾರೋಗ್ಯ ಮರೆಯಾಗುತ್ತದೆ. ಈ ಕಿರು ಹೊತ್ತಿಗೆ ಈ ದಿಶೆಯಲ್ಲಿ ನಿಮಗೊಂದು ದಿಕ್ಸೂಚಿ.
|
ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
|
|
| |
|
|
|
|
|
|
|
|
|