|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಜೀವನದುದ್ದಕ್ಕೂ ನಾವು ಹಲವಾರು ನಿರ್ಧಾರಗಳನ್ನು ಮಾಡಬೇಕು. ನಾವು ತೆಗೆದುಕೊಳ್ಳುವ ನಿರ್ಧಾರದಿಂದ ನಮಗೆ ಒಳ್ಳೆಯದಾಗಬೇಕು. ಬಂಧುಮಿತ್ರರಿಗೂ ಸಮಾಜಕ್ಕೂ ಒಳ್ಳೆಯದಾಗಬೇಕು. ಹೀಗಾಗಿ ಯಾವುದೇ ನಿರ್ಧಾರ ಮಾಡುವಾಗ ನಾವು ಸಾಕಷ್ಟು ಯೋಚಿಸಬೇಕಾಗುತ್ತದೆ. ಸಮಾಜದಲ್ಲಿ, ಕುಟುಂಬ ವ್ಯವಸ್ಥೆಯಲ್ಲಿ ಬದುಕುವಾಗ, ಯಾವುದೇ ನಿರ್ಧಾರ ಮಾಡುವಾಗ ಸ್ವಹಿತ-ಪರಹಿತ ಎರಡನ್ನೂ ಬ್ಯಾಲೆನ್ಸ್ ಮಾಡಬೇಕಾಗುತ್ತದೆ. ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಅಡ್ಡ ಮಾರ್ಗವನ್ನು ಹಿಡಿಯುವಂತಿಲ್ಲ. ಅನೇಕ ಸಂದರ್ಭಗಳಲ್ಲಿ ನಿರ್ಧಾರ ಕೈಗೊಳ್ಳುವುದು ಬಲುಕಷ್ಟವಾಗುತ್ತದೆ. ಇತರರ ಒತ್ತಡ, ಪರಿಸರದ ಇತಿಮಿತಿಗಳು, ಸಂದರ್ಭ ಸನ್ನಿವೇಶಗಳು ನಮ್ಮನ್ನು ತಪ್ಪು ನಿರ್ಧಾರ ಮಾಡಲು ಪ್ರೇರೇಪಿಸುತ್ತವೆ. ಅಧಿಕಾರ, ಕರ್ತವ್ಯ, ಸಮಾಜದ ನಿರೀಕ್ಷೆಗಳು ಅಹಿತವಾದ ನಿರ್ಧಾರ ಕೈಗೊಳ್ಳಲು ಒತ್ತಡ ಹಾಕುತ್ತವೆ. ಇಂತಹಾ ಸಂದರ್ಭಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ನಿಮಗೆ ಇದೊಂದು ಮಾರ್ಗದರ್ಶಿ ಪುಸ್ತಕ.
|
ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
|
|
| |
|
|
|
|
|
|
|
|
|