|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಾಚೀನ ಕಾಲದಿಂದಲೂ ಭಾರತದ ಸಂಬಾರ ಜಿನಸುಗಳು ವಿದೇಶಗಳಿಗೂ ರಫ್ತಾಗುತ್ತಿದ್ದು ಲೋಕಪ್ರಸಿದ್ಧಿ ಪಡೆದಿದ್ದವು. ಅಡುಗೆಗಷ್ಟೇ ಅಲ್ಲದೆ ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಹಲವು ವಿಧದ ಸಾಮಾನ್ಯ ಕಾಯಿಲೆಗಳ ನಿವಾರಣೆಗೂ ಬಳಸಲ್ಪಡುತ್ತಿದ್ದವು. ಇವನ್ನು ಮನೆಮದ್ದೆಂದು ಪರಿಗಣಿಸಿ ಜನ ಇಂದಿಗೂ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಹೀಗೆ ಉಪಯೋಗಿಸುವಂಥವು ಸಸ್ಯಜನ್ಯ ಪದಾರ್ಥಗಳಾಗಿದ್ದು ಗಿಡ-ಮರಗಳ ಎಲೆ, ತೊಗಟೆ, ಕಾಳು, ಬೇರು, ಗೆಡ್ಡೆ ಮತ್ತು ಕಾಯಿ ಮಾತ್ರ. ಪ್ರತಿಯೊಂದಕ್ಕೂ ಅದರದೇ ಆದ ಸುವಾಸನೆ ಹಾಗೂ ಔಷಧೀಯ ಗುಣಗಳಿವೆ. ದಿನನಿತ್ಯದ ಅಡುಗೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಬಳಸಿದರೆ ರುಚಿಯೂ ಹೆಚ್ಚು; ಆರೋಗ್ಯಕ್ಕೂ ಒಳ್ಳೆಯದು ಎಂದು ಆಯುರ್ವೇದ ಶಾಸ್ತ್ರ ಹೇಳುತ್ತದೆ. ಬಾಯಿ ಚಪಲಕ್ಕೆಂದು ಪ್ರಮಾಣವನ್ನು ಮೀರಿ ಬಳಸಿದಲ್ಲಿ ಅಡ್ಡ ಪರಿಣಾಮಗಳೂ ಇರುವ ಸಾಧ್ಯತೆಯಿದೆ. ಈ ಕೃತಿಯಲ್ಲಿ ಸಂಬಾರ ಪದಾರ್ಥಗಳ ಉಪಯುಕ್ತತೆ ಮತ್ತು ಸರಿಯಾಗಿ ಅಡುಗೆಯಲ್ಲಿ ಬಳಸುವ ವಿಧಾನವನ್ನು ತಿಳಿಸಲಾಗಿದೆ. ವರ್ಣಚಿತ್ರಗಳನ್ನು ಅಳವಡಿಸಿದ್ದು, ವಿವರಣೆಯೂ ಸೇರಿದಂತೆ ಆಕರ್ಷಕವಾಗಿ ರೂಪಿಸಲಾಗಿದೆ.
|
ಡಾ|| ವಸುಂಧರಾ ಭೂಪತಿ ಪ್ರಖ್ಯಾತ ಆಯುರ್ವೇದ ವೈದ್ಯೆ. ಪ್ರವೃತ್ತಿಯಲ್ಲಿ ಸಾಹಿತಿಯಾದ ಇವರ ೩೬ ಪುಸ್ತಕಗಳು ಪ್ರಕಟಗೊಂಡಿವೆ. ಇಂಗ್ಲಿಷ್, ಹಿಂದಿ ಭಾಷೆಗೆ ಇವರ ಕೆಲವು ಪುಸ್ತಕಗಳು ಅನುವಾದಗೊಂಡಿವೆ. ವೈದ್ಯಲೋಕ ಮಾಸಪತ್ರಿಕೆಯ ಸಂಪಾದಕರಾಗಿದ್ದಾರೆ. ಇವರು ಸಹಲೇಖಕಿಯಾಗಿ ರಚಿಸಿದ ಮನೆಯಂಗಳದಲ್ಲಿ ಔಷಧಿವನ ಪುಸ್ತಕ ಹಲವು ಮುದ್ರಣಗಳನ್ನು ಕಂಡಿದ್ದು, ‘ಶ್ರೇಷ್ಠ ಲೇಖಕಿ ಪುರಸ್ಕಾರ‘ ದೊರೆತಿದೆ. ೨೦೦೭ರಲ್ಲಿ ಎಚ್.ಐ.ವಿ.ಏಡ್ಸ್ ಲೇಖನಕ್ಕೆ ‘ಯೂನಿಸೆಫ್ ಪತ್ರಿಕೋದ್ಯಮ ಪ್ರಶಸ್ತಿ‘, ಹೂವು ಮತ್ತು ಆರೋಗ್ಯ ಪುಸ್ತಕಕ್ಕೆ ‘ಅಕಲಂಕ ಪ್ರಶಸ್ತಿ‘, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ೨೦೧೨ರಲ್ಲಿ ‘ಶ್ರೇಷ್ಠ ವಿಜ್ಞಾನ ಸಂವಹನಕಾರ ರಾಜ್ಯ ಪ್ರಶಸ್ತಿ‘, ಮುಂತಾದ ಪ್ರಶಸ್ತಿಗಳು ದೊರೆತಿವೆ. ಪ್ರಸ್ತುತ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿದ್ದಾರೆ.
|
|
| |
|
|
|
|
|
|
|
|
|